ಮೂರನೇ ಏಕದಿನ ಪಂದ್ಯ – ಟಾಸ್ ಗೆದ್ದ ಟೀಮ್ ಇಂಡಿಯ ಫೀಲ್ಡಿಂಗ್.. ತಂಡದಲ್ಲಿ ನಾಲ್ಕು ಬದಲಾವಣೆ
ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಸೋತಿರುವ ಟೀಮ್ ಇಂಡಿಯಾ ಇದೀಗ ಮರ್ಯಾದೆ ಉಳಿಸಿಕೊಳ್ಳಲು ಮೂರನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ಕೇಪ್ ಟೌನ್ ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಕೆ.ಎಲ್. ರಾಹುಲ್ ಅವರು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮೊದಲ ಎರಡು ಏಕದಿನ ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ ಮೂರನೇ ಏಕದಿನ ಪಂದ್ಯಕ್ಕೆ ನಾಲ್ಕು ಬದಲಾವಣೆಗಳನ್ನು ಮಾಡಿಕೊಂಡಿದೆ.
ಅಂತಿಮ 11ರ ಬಳಗಲ್ಲಿ ಸೂರ್ಯ ಕುಮಾರ್ ಯಾದವ್, ಜಯಂತ್ ಯಾದವ್, ದೀಪಕ್ ಚಾಹರ್ ಮತ್ತು ಪ್ರಸಿದ್ಧ್ ಕೃಷ್ಣ ಅವರನ್ನು ಸೇರಿಸಿಕೊಳ್ಳಲಾಗಿದೆ. ವೆಂಕಟೇಶ್ ಅಯ್ಯರ್, ಶಾರ್ದೂಲ್ ಥಾಕೂರ್, ಭುವನೇಶ್ವರ್ ಕುಮಾರ್ ಮತ್ತು ಅಶ್ವಿನ್ ಅವರನ್ನು ಹೊರಗಿಡಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.
ಸರಣಿ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಶಂಶಿ ಜಾಗದಲ್ಲಿ ಡ್ವೇನ್ ಪ್ರೆಟೊರಿಯಸ್ ಅವರು ಕಾಣಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾದ 11 ರ ಬಳಗ
ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಜಯಂತ್ ಯಾದವ್, ದೀಪಕ್ ಚಾಹರ್, ಯುಜುವೇಂದ್ರ ಚಾಹಲ್, ದೀಪಕ್ ಚಾಹರ್, ಜಸ್ಪ್ರಿತ್ ಬೂಮ್ರಾ.
ದಕ್ಷಿಣ ಆಫ್ರಿಕಾ 11ರ ಬಳಗ
ಜಾನೆಮನ್ ಮಲಾನ್, ಕ್ವಿಂಟನ್ ಡಿಕಾಕ್, ಟೆಂಬಾ ಬಾವುಮಾ (ನಾಯಕ), ಆಡೇನ್ ಮಾಕ್ರ್ರಮ್, ರಸೇಯ್ ವಾನ್ ಡೇರ್ ಡುಸಾನ್, ಡೇವಿಡ್ ಮಿಲ್ಲರ್, ಆಂಡಿಲೆ ಫೆಲುಕ್ಯಾವೊ, ಡ್ವೇನ್ ಪ್ರೆಟೊರಿಯಸ್, ಕೇಶವ್ ಮಹಾರಾಜ್, ಸಿಸಾಂದಾ ಮಗಾಳಾ. ಲುಂಗಿ ಎನ್ಗಿಡಿ