ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್ನಲ್ಲಿ ಮೊದಲ ವಿಕೆಟ್ ಪಡೆದು ಮಿಂಚಿದ್ದಾರೆ.
ಅಪ್ಪ ಸಚಿನ್ ತೆಂಡೂಲ್ಕರ್ ಮಗ ಅರ್ಜುನ್ ತೆಂಡೂಲ್ಕರ್ ಕೊನೆಯ ಓವರ್ ಹಾಕುವಾಗ ಆತಂಕದಲ್ಲಿದ್ದರು. ಕೊನೆಯ ಓವರ್ನಲ್ಲಿ ಅರ್ಜುನ್ 20 ರನ್ ಗಳನ್ನು ರಕ್ಷಣೆ ಮಾಡಬೇಕಿತ್ತು. ನಾಯಕ ರೋಹಿತ್ ಶರ್ಮಾ ಅವರ ನಂಬಿಕಯನ್ನು ಅರ್ಜುನ್ ತೆಂಡೂಲ್ಕರ್ ಉಳಿಸಿಕೊಂಡರು.
ಸನ್ ರೈಸರ್ಸ್ ಪರ ಕೊನೆಯ ಓವರ್ನಲ್ಲಿ ಅಬ್ದುಲ್ ಸಮಾದ್ ಮತ್ತು ಭುವನೇಶ್ವರ್ ಕುಮಾರ್ ಇದ್ದರು. ಅಮೋಘ ಬೌಲಿಂಗ್ ಪ್ರದರ್ಶಿಸಿದ ಅರ್ಜುನ್ ಕೇವಲ 5 ರನ್ ಕೊಟ್ಟರು.
ಅರ್ಜುನ್ ಬೌಲಿಂಗ್ ಬಗ್ಗೆ ಕ್ರಿಕೆಟ್ ದಿಗ್ಗಜರು ಹಾಗೂ ತಂಡದ ಸಹ ಆಟಗಾರರು ಮೆಚ್ಚುಗೆ ವ್ಯಕ್ತಪಡಿಸಿದರು. ಐದನೆ ಎಸೆತದಲ್ಲಿ ಭುವನೇಶ್ವರ್ ಕುಮಾರ್ ಅವರನ್ನು ಔಟ್ ಮಾಡುವ ಮೂಲಕ ಐಪಿಎಲ್ನಲ್ಲಿ ಮೊದಲ ವಿಕೆಟ್ ಪಡೆದರು.
ನಂತರ ಅರ್ಜುನ್ ತೆಂಡೂಲ್ಕರ್ ಮೊದಲ ವಿಕಟ್ ಪಡೆದಿದ್ದಕ್ಕೆ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಮಗನ ಸಾಧನೆಗೆ ಸ್ವತಃ ಸಚಿನ್ ತೆಂಡೂಲ್ಕರ್ ಸಂಭ್ರಮಟ್ಟಿದ್ದಾರೆ.