ಐಪಿಎಲ್ 15ನೇ ಆವೃತ್ತಿಯಲ್ಲಿ ಇಂದು ಬಲಾಢ್ಯ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು, ಟೂರ್ನಿಯ 49ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಉಭಯ ತಂಡಗಳು ಎದುರಾಗುತ್ತಿವೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ಸಿಎಸ್ಕೆ ನಾಯಕ ಎಂಎಸ್ ಧೋನಿ, ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪ್ರಬಲ ಪೈಪೋಟಿಯ ಪಂದ್ಯಕ್ಕಾಗಿ ಎರಡು ತಂಡಗಳು ರಣತಂತ್ರ ರೂಪಿಸಿಕೊಂಡು ಸಜ್ಜಾಗಿವೆ.
ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಕಳೆದ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಆರ್ಸಿಬಿ ತಂಡವನ್ನ ಮಣಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಆರ್ಸಿಬಿ ಸೇಡು ತೀರಿಸಿಕೊಳ್ಳುವ ನಿರೀಕ್ಷೆ ಹೊಂದಿದ್ದರೆ. ಧೋನಿ ಸಾರಥ್ಯದಲ್ಲಿ ಹೊಸ ಉತ್ಸಾಹದಲ್ಲಿರುವ ಸಿಎಸ್ಕೆ ಸಹ ಗೆಲುವಿನ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಲಿದೆ.
ಐಪಿಎಲ್ನಲ್ಲಿ ಉಭಯ ತಂಡಗಳ ಪ್ರಾಬಲ್ಯ ನೋಡುವುದಾದರೆ, ಈವರೆಗೂ ಆಡಿರುವ 29 ಪಂದ್ಯಗಳಲ್ಲಿ ಆರ್ಸಿಬಿ ಕೇವಲ 9 ಪಂದ್ಯದಲ್ಲಿ ಗೆಲುವು ಕಂಡಿದೆ. ಅಲ್ಲದೇ 2018ರಿಂದ ಈವರೆಗೆ ಆಡಿರುವ 9 ಪಂದ್ಯಗಳಲ್ಲಿ ಆರ್ಸಿಬಿ 2ರಲ್ಲಿ ಗೆಲುವು ಕಂಡಿದ್ದು, 7ರಲ್ಲಿ ಸೋಲನುಭವಿಸಿದೆ. ಹೀಗಾಗಿ ಆರ್ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಪ್ರಾಬಲ್ಯ ಜೋರಾಗಿದ್ದರೂ, ಇಂದಿನ ಹಣಾಹಣಿಯಲ್ಲಿ ಎರಡು ತಂಡಗಳು ಗೆಲುವಿಗಾಗಿ ಭಾರೀ ಪೈಪೋಟಿ ನಡೆಸಲಿವೆ.
ಉಭಯ ತಂಡಗಳು:
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡ್ವೇನ್ ಕಾನ್ವೆ, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ಎಂಎಸ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡ್ವೈನ್ ಪ್ರಿಟೋರಿಯಸ್, ಮಹೀಶ್ ತೀಕ್ಷಣ, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡುಪ್ಲೆಸ್ಸಿ(ನಾಯಕ), ವಿರಾಟ್ ಕೊಹ್ಲಿ, ರಜತ್ ಪಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೋರ್, ಹನಿಂದು ಹಸರಂಗ, ಜೋಶ್ ಹೇಜ಼ಲ್ವುಡ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್,