ನಾನು ಬಿಜೆಪಿ ಸೇರೋದು ಸುಳ್ಳು ಸುದ್ದಿ – ಹರ್ಭಜನ್ ಸಿಂಗ್
ನವದೆಹಲಿ: ಟೀಮ್ ಇಂಡಿಯಾದ ಮಾಸ್ಟರ್ ಪೀಸ್ ಜೋಡಿಗಳಾಗಿದ್ದ ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಹೊಸ ಇನ್ನಿಂಗ್ಸ್ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕ್ರಿಕೆಟ್ ಬದುಕು ಮುಗಿಸಿರುವ ಆಲ್ರೌಂಡರ್ ಯುವರಾಜ್ ಸಿಂಗ್ ಮತ್ತು ಟರ್ಬನೇಟರ್ ಹರ್ಭಜನ್ ಸಿಂಗ್ ಪಂಜಾಬ್ ಚುನಾವಣಾ ಅಖಾಡಕ್ಕೆ ಇಳಿಯು ಸಾಧ್ಯತೆಗಳು ಇವೆ ಎನ್ನಲಾಗಿದೆ. ಅಲ್ಲದೇ ಈ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡಿದೆ..
ಆದ್ರೆ ವದಂತಿಗಳಿಗೆ ಭಜ್ಜಿ ಬ್ರೇಕ್ ಹಾಕಿದ್ದಾರೆ.. ಹೌದು ನಾನು ಬಿಜೆಪಿ ಸೇರುವ ವದಂತಿ ಸುಳ್ಳು.. ನಾನು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್.. ಟ್ವೀಟ್ ಮಾಡಿರುವ ಹರ್ಭಜನ್ ಸಿಂಗ್, ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಬಗ್ಗೆ ಹರಡುತ್ತಿರುವ ಸುದ್ದಿಗೆ ಪ್ರತಿಕ್ರಿಯಿಸಿದ್ದು, ತಾವು ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂತಹ ವದಂತಿಗಳನ್ನ ದಯಮಾಡಿ ಗಂಭೀರವಾಗಿ ಪರಿಗಣಿಸಬೇಡಿ ಎಂದು ಮನವಿ ಮಾಡಿದ್ದಾರೆ..
ಅಂದ್ಹಾಗೆ ಯುವಿ ಕೂಡ ಬಿಜೆಪಿ ಸೇರುತ್ತಾರೆ ಎನ್ನುವ ವದಂತಿ ಇದೆ.. ಆದ್ರೆ ಈವರೆಗೂ ಯುವರಾಜ್ ಸಿಂಗ್ ಮಾತ್ರ ಯಾವುದೇ ಸ್ಪಷ್ಟನೆ ನೀಡಿಲ್ಲ. ಅಂದ್ಹಾಗೆ 2017ರ ವಿಧಾನಸಭೆ ಚುನಾವಣೆ ವೇಳೆಯೂ ಹರ್ಭಜನ್ ಸಿಂಗ್ ಬಗ್ಗೆ ಇದೇ ರೀತಿಯ ಪ್ರಚಾರ ನಡೆದಿತ್ತು. ಆಗ ಭಜ್ಜಿ ಕಾಂಗ್ರೆಸ್ ಪಕ್ಷ ಸೇರುವ ಸುದ್ದಿ ಹಬ್ಬಿತ್ತು.