ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಇಂದಿನಿಂದ ಆರಂಭವಾಗಲಿದ್ದು, ಅಹ್ಮದಾಬಾದ್ನಲ್ಲಿ ನಡೆಯುವ ಫೈನಲ್ ಫೈಟ್ಗಾಗಿ ಎರಡು ತಂಡಗಳು ಸಜ್ಜಾಗಿವೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೂರು ಟೆಸ್ಟ್ಗಳಲ್ಲಿ ಭಾರತ 2 ಪಂದ್ಯಗಳನ್ನ ಗೆದ್ದು ಪ್ರಾಬಲ್ಯ ಸಾಧಿಸಿದ್ದರೆ, ಪ್ರವಾಸಿ ಆಸ್ಟ್ರೇಲಿಯ ಕೂಡ 1 ಟೆಸ್ಟ್ನಲ್ಲಿ ಗೆಲುವು ಕಂಡಿದೆ. ಹೀಗಾಗಿ ಸರಣಿಯ ಅಂತಿಮ ಪಂದ್ಯದಲ್ಲಿ ಎರಡು ತಂಡಗಳು ಗೆಲುವಿನ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಲಿದೆ.
ಸರಣಿಯ ಆರಂಭಿಕ ಎರಡು ಟೆಸ್ಟ್ಗಳಲ್ಲಿ ಸೋಲಿನ ಕಹಿ ಅನುಭವಿಸಿದ್ದ ಭಾರತ 3ನೇ ಟೆಸ್ಟ್ನಲ್ಲಿ ಭರ್ಜರಿ ಜಯದೊಂದಿಗೆ ಅದ್ಭುತ ಕಮ್ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ ಈ ಗೆಲುವಿನ ಮೂಲಕ ಪ್ರವಾಸಿ ಆಸೀಸ್ ತಂಡ ಜೂನ್ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪ್ರವೇಶದ ನಿರೀಕ್ಷೆ ಹೊಂದಿರುವ ಭಾರತ, ನಾಲ್ಕನೇ ಟೆಸ್ಟ್ನಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿ ಕಣಕ್ಕಿಳಿಯಲಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಎರಡು ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುವ ನಿಟ್ಟಿನಲ್ಲಿ ತಮ್ಮದೇ ರಣತಂತ್ರ ರೂಪಿಸಿಕೊಂಡು ಸಜ್ಜಾಗಿವೆ.
ಸರಣಿಯ ಆರಂಭಿಕ ಎರಡು ಟೆಸ್ಟ್ ಪಂದ್ಯಗಳಲ್ಲಿ ಕೆಎಲ್ ರಾಹುಲ್, ಭಾರತ ಆರಂಭಿಕ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿದಿದ್ದರು. ಆದರೆ ಎರಡು ಟೆಸ್ಟ್ಗಳಲ್ಲಿ ರಾಹುಲ್ ನಿರೀಕ್ಷಿತ ಪ್ರದರ್ಶನ ನೀಡದ ಕಾರಣ, 3ನೇ ಟೆಸ್ಟ್ ಪಂದ್ಯಕ್ಕೆ ಶುಭ್ಮನ್ ಗಿಲ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಯಿತು. ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಗಿಲ್, ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಹೀಗಾಗಿ ಅಹ್ಮದಾಬಾದ್ನಲ್ಲಿ ನಡೆಯುವ ಸರಣಿಯ ಅಂತಿಮ ಟೆಸ್ಟ್ ಪಂದ್ಯಕ್ಕೆ ರಾಹುಲ್ ಹಾಗೂ ಗಿಲ್ ಇಬ್ಬರಲ್ಲಿ ಯಾರನ್ನ ಆಡಿಸಬೇಕು ಎಂಬ ಲೆಕ್ಕಾಚಾರ ಟೀಂ ಇಂಡಿಯಾ ಮ್ಯಾನೇಜ್ಮೆಂಟ್ನಲ್ಲಿ ಶುರುವಾಗಿದೆ.
IND v AUS, Team India, Australia, Rohit Sharma, Steve Smith, Border Gavaskar, Sports Karnataka