ಟೀಂ ಇಂಡಿಯಾದ ಭರವಸೆಯ ಆಟಗಾರ ಋತುರಾಜ್ ಗಾಯಕ್ವಾಡ್, ಸೌತ್ ಆಫ್ರಿಕಾ ವಿರುದ್ಧದ ಎರಡನೇ ಪಂದ್ಯದಲ್ಲಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಆದರೆ ರಾಂಚಿಯಲ್ಲಿ ನಡೆದ 2ನೇ ಪಂದ್ಯದಿಂದ ಋತುರಾಜ್ ಅವರನ್ನ ತಂಡದಿಂದ ಕೈಬಿಟ್ಟಿದ್ದಕ್ಕೆ ಹಲವು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧ ಲಕ್ನೋದಲ್ಲಿ ನಡೆದ ಮೊದಲ ODI ಪಂದ್ಯದ ಮೂಲಕ ಋತುರಾಜ್ ಗಾಯಕ್ವಾಡ್, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಮೊದಲ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲವಾದ ಗಾಯಕ್ವಾಡ್, ಕೇವಲ 19(42) ರನ್ಗಳಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದರು.
25 ವರ್ಷದ ಬಲಗೈ ಬ್ಯಾಟ್ಸ್ಮನ್ ಎರಡನೇ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡುವ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಹೊಂದಿದ್ದರು. ಆದರೆ 2ನೇ ODI ಪಂದ್ಯದಿಂದ ಋತುರಾಜ್ ಗಾಯಕ್ವಾಡ್ ಅವರನ್ನ ಕೈಬಿಟ್ಟಿದ್ದು, ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
ಋತುರಾಜ್ ಗಾಯಕ್ವಾಡ್ ಅವರನ್ನ 2ನೇ ಪಂದ್ಯಕ್ಕೆ ತಂಡದಿಂದ ಕೈಬಿಟ್ಟ ಟೀಂ ಇಂಡಿಯಾದ ಮ್ಯಾನೇಜ್ಮೆಂಟ್ ನಿರ್ಧಾರದ ಬಗ್ಗೆ ಹಲವರು ಸೋಶಿಯಲ್ ಮೀಡಿಯಾದಲ್ಲಿ ತನ್ನ ಅಸಮಾಧಾನ ಹೊರಹಾಕಿದ್ದಾರೆ.
ಕೇವಲ ಒಂದು ಪಂದ್ಯದಲ್ಲಿ ಅವಕಾಶ ನೀಡಿ, ಉತ್ತಮ ಪ್ರದರ್ಶನ ನೀಡದ ಕಾರಣಕ್ಕೆ ತಂಡದಿಂದ ಕೈಬಿಟ್ಟಿದ್ದು ಸರಿಯಲ್ಲ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೇ ಋತುರಾಜ್ ಗಾಯಕ್ವಾಡ್, ODI ಕ್ರಿಕೆಟ್ಗೆ ಉತ್ತಮ ಆಟಗಾರನಾಗಿದ್ದು, ಭವಿಷ್ಯದಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡುವ ಬಗ್ಗೆ ಹಲವು ಅಭಿಮಾನಿಗಳು ವಿಶ್ವಾಸ ಹೊಂದಿದ್ದಾರೆ.
ಐಪಿಎಲ್ನಲ್ಲಿ ಸ್ಪೋಟಕ ಬ್ಯಾಟಿಂಗ್ನಿಂದ ಮಿಂಚಿದ್ದ ಋತುರಾಜ್ ಗಾಯಕ್ವಾಡ್, ಈವರೆಗೂ ಒಂಭತ್ತು T20I ಪಂದ್ಯಗಳನ್ನು ಆಡಿದ್ದು, 17.9ರ ಸರಾಸರಿ ಹಾಗೂ 128.9ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ.
IND v SA ODI