ಬಾಂಗ್ಲಾದೇಶ ವಿರುದ್ಧದ ಕದನಕ್ಕೆ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಲಭ್ಯತೆ ಕುರಿತು ಕೋಚ್ ರಾಹುಲ್ ದ್ರಾವಿಡ್ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಅಡಿಲೇಡ್ಗೆ ಬಂದಿಳಿದಿರುವ ಟೀಮ್ ಇಂಡಿಯಾ ಅಭ್ಯಾಸದಲ್ಲಿ ನಿರತವಾಗಿತ್ತು. ಕಾರ್ತಿಕ್ ಅಭ್ಯಾದಲ್ಲಿ ಪಾಲ್ಗೊಂಡಿದ್ದರು ಎಂದು ಮಾಹಿತಿ ನೀಡಿದರು. ಮೊನ್ನೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಬೆನ್ನು ನೋವಿನಿಂದಾಗಿ ಮೈದಾನದಿಂದ ಹೊರ ನಡೆದಿದ್ದರು.
ಇದೀಗ ಕೋಚ್ ರಾಹುಲ್ ದ್ರಾವಿಡ್ ದಿನೇಶ್ ಕಾರ್ತಿಕ್ ಆಡುವ ಬಗ್ಗೆ ಸಕರಾತ್ಮಕವಾಗಿದ್ದು ಬುಧವಾರ ಬೆಳಗ್ಗೆ ಲಭ್ಯತೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.
ಬೌನ್ಸರ್ ಚೆಂಡನ್ನು ಹಿಡಿಯಲು ಹೋಗಿ ದಿನೇಶ್ ಕಾರ್ತಿಕ್ ಬೆನ್ನು ನೋವಿಗೆ ಗುರಿಯಾಗಿದ್ದಾರೆ. ಚಿಕಿತ್ಸೆ ಪಡೆದ ನಂತರ ಚೆನ್ನಾಗಿದ್ದಾರೆ. ಅಭ್ಯಾಸದ ವೇಳೆಯೂ ದಿನೇಶ್ ಕಾರ್ತಿಕ್ ವರ್ಕೌಟ್ ಮಾಡಿದ್ದಾರೆ ಎಂದು ಕೋಚ್ ದ್ರಾವಿಡ್ ಹೇಳಿದ್ದಾರೆ.
ಟಿ20 ವಿಶ್ವಕಪ್ನಲ್ಲಿ ದಿನೇಶ್ ಕಾರ್ತಿಕ್ ಪ್ರದರ್ಶನದ ಕುರಿತು ಚರ್ಚೆ ನಡೆಯುತ್ತಿದೆ. ಡಿಕೆ ಸೌತ್ ಆಫ್ರಿಕಾ ವಿರುದ್ಧ 15 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿದರು.