ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ರತ ತಂಡವನ್ನು ಪ್ರಕಟಿಸಲಾಗಿದ್ದು ವೇಗಿ ಜಯದೇವ್ ಉನದ್ಕತ್ ಸ್ಥಾನ ಪಡೆದಿದ್ದಾರೆ.
ಮಾ.17ರಿಂದ ಆರಂಭವಾಗಲಿರುವ ಏಕದಿನ ಸರಣಿಗೆ ಬಿಸಿಸಿಐ 18 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ರಣಜಿ ಚಾಂಪಿಯನ್ ನಾಯಕ ಜಯದೇವ್ ಉನದ್ಕತ್ 9 ವರ್ಷಗಳ ಬಳಿಕ ಏಕದಿನ ತಂಡಕ್ಕೆ ಮರಳಿದ್ದಾರೆ. ಕಳೆದ ವರ್ಷವಷ್ಟೆ ಬಾಂಗ್ಲಾದೇಶ ವಿರುದ್ಧ ಆಡುವ ಮೂಲಕ ಟೆಸ್ಟ್ಗೆ ಮರಳಿದ್ದರು. ಇದೀಗ ಏಕದಿನ ಸರಣಿಗೂ ಮರಳಿದ್ದಾರೆ. ಜಯದೇವ್ 21 ನವೆಂಬರ್ 2013ರಲ್ಲಿ ಕೊನೆಯ ಬಾರಿಗೆ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದರು. ಇದೀಗ ಭಾರತ ತಂಡದಲ್ಲಿ ಮತ್ತೊಂದು ಅಧ್ಯಾಯ ಆರಂಭಿಸಲಿದ್ದಾರೆ.
ಇನ್ನು ಟೆಸ್ಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಕೂಡ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ಕೆ.ಎಲ್.ರಾಹುಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯಜ್ವಿಂದರ್ ಚಾಹಲ್, ಮೊಹ್ಮದ್ ಶಮಿ, ಮೊಹ್ಮದ್ ಸಿರಾಜ್, ಉಮ್ರಾನ್ ಮಲ್ಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.
ಮೊದಲ ಪಂದ್ಯಕ್ಕೆ ರೋಹಿತ್ ಅಲಭ್ಯ
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಸಿಸ್ ವಿರುದ್ಧದ ಮೊದಲ ಪಂದ್ಯಕ್ಕೆ ಅಲಭ್ಯಯರಾಗಲಿದ್ದಾರೆ. ವೈಯಕ್ತಿಕ ಕಾರಣ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯ ಆಡುತ್ತಿಲ್ಲ . ಉಪನಾಯಕ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.