15ನೇ ಐಪಿಎಲ್ ಆವೃತ್ತಿಯ ಅನೌಪಚಾರಿಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಎರಡು ತಂಡಗಳು ಮುಖಾಮುಖಿ ನಡೆಸಲು ಸಜ್ಜಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ತಂಡದ ನಾಯಕ ಎಂ.ಎಸ್.ಧೋನಿ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದಿನ ಪಂದ್ಯಕ್ಕಾಗಿ ಚೆನ್ನೈ ತಂಡದಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದು, ತಂಡದ ಹಲವು ಆಟಗಾರು ಇಂದಿನ ಪಂದ್ಯದಿಂದ ಹೊರಗೊಳಿದಿದ್ದಾರೆ. ಪ್ರಮುಖವಾಗಿ ಜಗದೀಸನ್, ಮಿಚೆಲ್ ಸ್ಯಾಂಟ್ನರ್, ಸೋಲಂಕಿ ಹಾಗೂ ಮತೀಶ್ ಪತೀರಣ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಡ್ವೇನ್ ಬ್ರಾವೋ ಹಾಗೂ ತೀಕ್ಷಣ ಅವರು ತಂಡದಿಂದ ಹೊರಗುಳಿದಿದ್ದಾರೆ.
ಆದರೆ ಟೂರ್ನಿಯಲ್ಲಿ ಈಗಾಗಲೇ ಭರ್ಜರಿ ಪ್ರದರ್ಶನ ನೀಡಿರುವ ಗುಜರಾತ್ ಈಗಾಗಲೇ ಪ್ಲೇ-ಆಫ್ ಪ್ರವೇಶಿಸಿದ್ದು, ಮೊದಲ ಸ್ಥಾನದಲ್ಲಿ ಉಳಿಯುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಲಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಉತ್ತಮವಾಗಿರುವ ಗುಜರಾತ್ ಇಂದಿನ ಪಂದ್ಯದಲ್ಲಿ ಯಾವುದೇ ಬದಲಾವಣೆ ಇಲ್ಲದೇ ಕಣಕ್ಕಿಳಿಯುತ್ತಿದೆ.
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡ್ವೇನ್ ಕಾನ್ವೆ, ಮೊಯೀನ್ ಅಲಿ, ಶಿವಂ ದುಬೆ, ಎನ್.ಜಗದೀಶನ್, ಮಹೇಂದ್ರ ಸಿಂಗ್ ಧೋನಿ(ನಾಯಕ), ಮಿಚೆಲ್ ಸ್ಯಾಂಟ್ನರ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಮತೀಶ್ ಪತಿರಣ, ಮುಖೇಶ್ ಚೌಧರಿ.
ಗುಜರಾಜ್ ಟೈಟನ್ಸ್: ವೃದ್ಧಿಮಾನ್ ಸಾಹ, ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯ, ರಶೀದ್ ಖಾನ್, ಸಾಯಿ ಕಿಶೋರ್, ಅಲ್ಜರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ