ರಾಜಸ್ಥಾನ್ ರಾಯಲ್ಸ್ ಆರಂಭಿಕ ಆಟಗಾರ ಜೋಸ್ ಬಟ್ಲರ್ ಅವರು ತಮ್ಮ ಸಹ ಆಟಗಾರ ಪ್ರಸಿದ್ಧ ಕೃಷ್ಣ ಯಶಸ್ವಿ ವೇಗದ ಬೌಲರ್ ಆಗುವ ಎಲ್ಲಾ ಗುಣಗಳನ್ನು ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಸಿದ್ಧ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತಕ್ಕಾಗಿ ಆಡುತ್ತಾರೆ ಎಂದು ತಿಳಿಸಿದ್ದಾರೆ. ಕೃಷ್ಣ ಕಳೆದ ವರ್ಷ ಮಾರ್ಚ್ನಲ್ಲಿ ಭಾರತದ ಪರ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು ಮತ್ತು ಅವರ ಪ್ರದರ್ಶನವೂ ಉತ್ತಮವಾಗಿತ್ತು. ಅವರು ತಮ್ಮ ವೇಗ ಮತ್ತು ಬೌನ್ಸ್ನಿಂದ ವೆಸ್ಟ್ ಇಂಡೀಸ್ ತಂಡವನ್ನು ಕಾಡಿದ್ದರು. ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪರ ಸ್ಥಿರ ಪ್ರದರ್ಶನ ನೀಡಿದ್ದರು.
ಪ್ರಸಿದ್ಧ ಅವರ ವೇಗ ಮತ್ತು ಕೌಶಲ್ಯಕ್ಕೆ ಯಾವುದೇ ಕೊರತೆಯಿಲ್ಲ. ಅವರು ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ಭಾರತದ ಅತ್ಯಂತ ಯಶಸ್ವಿ ವೇಗದ ಬೌಲರ್ ಆಗುವ ಎಲ್ಲಾ ಗುಣಗಳನ್ನು ಹೊಂದಿದ್ದಾರೆ. ಅವರು ಭಾರತಕ್ಕಾಗಿ ರೆಡ್ ಬಾಲ್ ಕ್ರಿಕೆಟ್ ಆಡುವುದನ್ನು ನಾನು ನೋಡುತ್ತೇನೆ. ನಿರ್ಣಾಯಕ ಸಂದರ್ಭಗಳಲ್ಲಿ ಅನುಭವಿ ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್ ಮತ್ತು ಟ್ರೆಂಟ್ ಬೌಲ್ಟ್ ಅವರ ಅಮೂಲ್ಯ ಅನುಭವದಿಂದ ತಂಡವು ಪ್ರಯೋಜನ ಪಡೆಯುತ್ತಿದೆ. ಅವರ ಅನುಭವವು ನಿಜವಾಗಿಯೂ ಅಮೂಲ್ಯವಾಗಿದೆ” ಎಂದು ಬಟ್ಲರ್ ಹೇಳಿದರು.
ನಾಯಕ ಸಂಜು ಸ್ಯಾಮ್ಸನ್ ಬಗ್ಗೆ ಮಾತನಾಡಿರುವ ಬಟ್ಲರ್ ಅವರು ಮೊದಲಿಗಿಂತ ಈಗ ಹೆಚ್ಚು ಪ್ರಬುದ್ಧರಾಗಿದ್ದಾರೆ. ಅವರ ಅಡಿಯಲ್ಲಿ ಆಡುವುದನ್ನು ಆನಂದಿಸುತ್ತಿನೆ. ಅವರು ತುಂಬಾ ತಮಾಷೆಯ ವ್ಯಕ್ತಿ ಮತ್ತು ಅವರು ಇಡೀ ತಂಡವನ್ನು ಉತ್ತಮವಾಗಿ ನಡೆಸಿಕೊಳ್ಳುತ್ತಾರೆ. ಐಪಿಎಲ್ 2022 ರ ಪ್ರತಿ ಪಂದ್ಯದಲ್ಲೂ ಇಬ್ಬನಿ ದೊಡ್ಡ ಪಾತ್ರವನ್ನು ವಹಿಸುತ್ತದೆ. ಇಬ್ಬನಿ ನಮಗೆ ನಿಯಂತ್ರಿಸಲು ಸಾಧ್ಯವಿಲ್ಲ ಆದರೆ ನಾವು ಒದ್ದೆಯಾದ ಚೆಂಡಿನೊಂದಿಗೆ ಅಭ್ಯಾಸ ಮಾಡುತ್ತಿದ್ದೇವೆ” ಎಂದು ಆರಂಭಿಕ ಆಟಗಾರ ಜೋಸ್ ಹೇಳಿದ್ದಾರೆ.