ವೆಸ್ಟ್ ಇಂಡೀಸ್(West Indies) ವಿರುದ್ಧದ ಸರಣಿಗೆ ಕ್ಷಣಗಣನೆ ಆರಂಭದ ಬೆನ್ನಲ್ಲೇ ಟೀಂ ಇಂಡಿಯಾಕ್ಕೆ(Team India) ಆಘಾತ ಎದುರಾಗಿದೆ. ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಕೆ.ಎಲ್.ರಾಹುಲ್, ಕೋವಿಡ್-19(Covid-19) ಸೋಂಕಿಗೆ ತುತ್ತಾಗಿದ್ದಾರೆ.
ಭಾರತದ ತಂಡದ ಬ್ಯಾಟಿಂಗ್ ಸ್ಟಾರ್ ಕನ್ನಡಿಗ ಕೆ.ಎಲ್.ರಾಹುಲ್, ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಆದರೆ ಜು.29ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕೆ.ಎಲ್. ರಾಹುಲ್, ಬೆಂಗಳೂರಿನ ನ್ಯಾಷಿನಲ್ ಕ್ರಿಕೆಟ್ ಅಕಾಡೆಮಿ(National Cricket Academy)ಯಲ್ಲಿ ಫಿಟ್ನೆಸ್ ತರಬೇತಿ ಪಡೆಯುತ್ತಿದ್ದಾರೆ.
ಟಿ20 ಸರಣಿಗೆ ಭರ್ಜರಿ ಕಮ್ಬ್ಯಾಕ್ ಮಾಡುವ ತವಕದಲ್ಲಿರುವ ಕೆ.ಎಲ್. ರಾಹುಲ್, ಗುರುವಾರ ಲೆವೆಲ್-3 ಕ್ರಿಕೆಟ್ ಕೋಚ್ ತರಬೇತಿಯಲ್ಲಿರುವ ಅಭ್ಯರ್ಥಿಗಳೊಂದಿಗೆ ಸಂವಾದ ಸಹ ನಡೆಸಿದ್ದು, ಇದಕ್ಕಾಗಿ ಎನ್ಸಿಎ ಮುಖ್ಯಸ್ಥ ಹಾಗೂ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮೂಲಕ ಫೋಟೋಗಳನ್ನು ಶೇರ್ ಮಾಡುವ ಮೂಲಕ ಕೃತಜ್ಞತೆ ಸಹ ಸಲ್ಲಿಸಿದ್ದಾರೆ.
ಟೀಂ ಇಂಡಿಯಾಕ್ಕೆ ವಾಪಸ್ಸಾಗುವ ನಿಟ್ಟಿನಲ್ಲಿ ಸಿದ್ಧತೆ ನಡೆಸುತ್ತಿರುವ ಕೆ.ಎಲ್. ರಾಹುಲ್, 2022ರ ಐಪಿಎಲ್ ಪ್ಲೇ-ಆಫ್ ನಂತರದಲ್ಲಿ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಆಡಿಲ್ಲ. ಈ ನಡುವೆ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ರಾಹುಲ್, ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಪಡೆದಿದ್ದರು. ಸದ್ಯ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದ ರಾಹುಲ್, ಕೋವಿಡ್-19 ಸೋಂಕಿಗೆ ತುತ್ತಾಗಿದ್ದು, ಟಿ20 ಸರಣಿ ವೇಳೆಗೆ ಚೇತರಿಸಿಕೊಳ್ಳುವ ನಿರೀಕ್ಷೆ ಹೊಂದಿದ್ದಾರೆ.