ಗಾಯದ ಸಮಸ್ಯೆಯಿಂದಾಗಿ ಕಳೆದ ಕೆಲವು ತಿಂಗಳಿನಿಂದ ತಂಡದಿಂದ ಹೊರಗುಳಿದಿರುವ ಟೀಂ ಇಂಡಿಯಾ(Team India) ಉಪನಾಯಕ ಕೆ.ಎಲ್.ರಾಹುಲ್ (KL Rahul) ಮುಂಬರುವ ವೆಸ್ಟ್ ಇಂಡೀಸ್ ಟಿ20 ಸರಣಿಯಲ್ಲಿ ಭರ್ಜರಿ ಕಮ್ಬ್ಯಾಕ್ ಮಾಡುವ ತವಕದಲ್ಲಿದ್ದಾರೆ.
hernia injury ಇಂದ ಚೇತರಿಸಿಕೊಂಡಿರುವ ಕನ್ನಡಿಗ ಕೆ.ಎಲ್.ರಾಹುಲ್, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತರಬೇತಿ ಆರಂಭಿಸಿದ್ದಾರೆ. ಈಗಾಗಲೇ ಬೆಂಗಳೂರಿನ ನ್ಯಾಷಿನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಟ್ರೈನಿಂಗ್ ಜಿಮ್ನಲ್ಲಿ ಕಾಣಿಸಿಕೊಂಡಿದ್ದರು. ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಕ್ಲಿಪ್ವೊಂದನ್ನ ಶೇರ್ ಮಾಡಿರುವ ಕೆ.ಎಲ್. ರಾಹುಲ್, ಸ್ಟ್ರಾಂಗ್ ಕಮ್ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.
ಕಳೆದ ಐಪಿಎಲ್ 2022 ಸಂದರ್ಭದಲ್ಲಿ ಗಾಯದ ಸಮಸ್ಯೆಗೆ ಸಿಲುಕಿದ್ದ ಕೆ.ಎಲ್. ರಾಹುಲ್, ವೆಸ್ಟ್ ಇಂಡೀಸ್ ವಿರುದ್ಧ ಜು.29ರಿಂದ ಆಗಸ್ಟ್ 7ರವರೆಗೆ ನಡೆಯುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ತಮ್ಮ ತರಬೇತಿಯ ವಿಡಿಯೋ ಹಂಚಿಕೊಂಡಿರುವ ಕೆ.ಎಲ್. ರಾಹುಲ್, ಎನ್ಸಿಎ ಫಿಟ್ನೆಸ್ ಟೆಸ್ಟ್ ಪೂರ್ಣಗೊಳಿಸಿದ್ದಾರೆ. 2022ರ ಐಪಿಎಲ್ನಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡವನ್ನ ಚೊಚ್ಚಲ ಬಾರಿಗೆ ಐಪಿಎಲ್ ಫೈನಲ್ಗೆ ಕೊಂಡೊಯ್ದಿದ್ದ ಕೆ.ಎಲ್.ರಾಹುಲ್, ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಕನ್ನಡಿಗ ಕೆ.ಎಲ್. ರಾಹುಲ್ ತವರಿನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಕ್ಯಾಪ್ಟನ್ ಆಗಿ ತಂಡವನ್ನ ಮುನ್ನಡೆಸುವ ಅವಕಾಶ ಪಡೆದಿದ್ದರು. ಆದರೆ ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದ ಪರಿಣಾಮ ಈ ಅವಕಾಶ ರಿಷಬ್ ಪಂತ್ ಅವರ ಪಾಲಾಗಿತ್ತು. ಬಳಿಕ ನಡೆದ ಐರ್ಲೆಂಡ್ ಸರಣಿಗೂ ರಾಹುಲ್ ಅಲಭ್ಯರಾಗಿದ್ದ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ, ಮೊದಲ ಬಾರಿಗೆ ಟೀಂ ಇಂಡಿಯಾದ ನಾಯಕತ್ವವಹಿಸಿದ್ದರು.