ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಮೊಹಾಲಿಯಲ್ಲಿ ಭರ್ಜರಿಯಾಗಿ ಗೆದ್ದಿರುವ ಭಾರತ ಈಗ ಬೆಂಗಳೂರಿನಲ್ಲಿ ನಡೆಯುವ 2ನೇ ಟೆಸ್ಟ್ ಪಂದ್ಯಕ್ಕೆ ತಯಾರಿ ಮಾಡಿಕೊಳ್ಳುತ್ತಿದೆ. ಟೆಸ್ಟ್ ಸರಣಿ ಕ್ಲೀನ್ ಸ್ಪೀಪ್ ಲೆಕ್ಕಾಚಾರದಲ್ಲಿರುವ ಭಾರತ ಚಿನ್ನಸ್ವಾಮಿಯಲ್ಲಿ ನಡೆಯುವ ಟೆಸ್ಟ್ ಪಂದ್ಯವನ್ನೂ ಗೆಲ್ಲುವ ಪ್ಲಾನ್ ಮಾಡಿದೆ. ಈ ಮಧ್ಯೆ ಕೊನೆಯ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಿದೆ.
ಮೊದಲ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಸ್ಥಾನ ಪಡೆದಿದ್ದ ಕುಲ್ದೀಪ್ ಯಾದವ್ 2ನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನದಲ್ಲಿ ಆಲ್ರೌಂಡರ್ ಅಕ್ಸರ್ ಪಟೇಲ್ ಜಾಗ ಗಿಟ್ಟಿಸಿಕೊಂಡಿದ್ದಾರೆ. ಅಚ್ಚರಿ ಅಂದರೆ ಕುಲ್ದೀಪ್ ಟೆಸ್ಟ್ ಆಡದೇ ತಂಡದಿಂದ ಸ್ಥಾನ ಕಳೆದುಕೊಂಡಿದ್ದಾರೆ.
2ನೇ ಟೆಸ್ಟ್ ಪಂದ್ಯ ಮಾರ್ಚ್ 12 ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಇದು ಬೆಂಗಳೂರಿನಲ್ಲಿ ನಡೆಯುವ ಮೊದಲ ಹಗಲು-ರಾತ್ರಿ ಪಂದ್ಯವಾಗಿದೆ. ಬೆಂಗಳೂರು ಟೆಸ್ಟ್ ಪಂದ್ಯಕ್ಕೆ ಅಕ್ಸರ್ ಜಯಂತ್ ಯಾದವ್ ಸ್ಥಾನದಲ್ಲಿ ಆಡುವ ಸಾಧ್ಯತೆ ಇದೆ. ಜಯಂತ್ ಮೊಹಾಲಿ ಟೆಸ್ಟ್ ಪಂದ್ಯ ಆಡಿದ್ದರೂ ಇಂಪ್ರೆಸ್ ಮಾಡಿರಲಿಲ್ಲ.
ಎರಡನೇ ಟೆಸ್ಟ್ಗೆ ಭಾರತ ಟೆಸ್ಟ್ ತಂಡ
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಿಯಾಂಕ್ ಪಾಂಚಾಲ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಭ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಆರ್ ಅಶ್ವಿನ್, ಆರ್ ಅಶ್ವಿನ್ ಅಕ್ಷರ್ ಪಟೇಲ್, ಸೌರಭ್ ಕುಮಾರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದ್, ಮೊಹಮ್ಮದ್ ಶಮಿ.