ರಹಾನೆ, ಪೂಜಾರಾ, ಇಶಾಂತ್ ಗೆ ಲಾಸ್ಟ್ ಚಾನ್ಸ್..
ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಕೆಲವರಿಗೆ ಕೊನೆಯ ಚಾನ್ಸ್ ಆಗಿದೆ. ಈ ಸರಣಿಯ ಬಳಿಕ ಟೀಂ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳಾಗುವ ಸಾಧ್ಯತೆಗಳಿವೆ.
ಹೀಗಾಗಿ ಟೀಂ ಇಂಡಿಯಾದಲ್ಲಿ ನಾಯಕತ್ವದ ಬದಲಾವಣೆ ಆಗಿದ್ದು, ಟೆಸ್ಟ್ ಉಪನಾಯಕತ್ವದಿಂದ ರಹಾನೆ ಅವರನ್ನ ಕೆಳಗಿಳಿಸಲಾಗಿದೆ. ಆ ಮೂಲಕ ಕೆಲ ಆಟಗಾರರಿಗೆ ಬಿಸಿಸಿಐ ಬಿಗ್ ಬಾಸ್ ಗಳು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಮುಖ್ಯವಾಗಿ ಟೀಂ ಇಂಡಿಯಾ ಹಿರಿಯ ವೇಗದ ಬೌಲರ್ ಇಶಾಂತ್ ಶರ್ಮಾಗೆ ಆಫ್ರಿಕಾ ಟೂರ್ ಕೊನೆಯದ್ದಾಗಲಿದೆ ಎಂದು ಹೇಳಲಾಗುತ್ತಿದೆ.
ಹೌದು..! ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಸೌತ್ ಆಫ್ರಿಕಾ ಟೂರಿಗೆ ಬಿಸಿಸಿಐ ಈಗಾಗಲೇ ತಂಡವನ್ನು ಪ್ರಕಟ ಮಾಡಿದ್ದು, ಇಶಾಂತ್ ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆದ್ರೆ ಆಡುವ ಹನ್ನೊಂದರಲ್ಲಿ ಇಶಾಂತ್ ಸ್ಥಾನ ಪಡೆಯೋದು ಅನುಮಾನವಾಗಿದೆ. ಟೀಂ ಇಂಡಿಯಾದ ಪರ 105 ಟೆಸ್ಟ್ ಪಂದ್ಯಗಳನ್ನಾಡಿರುವ ಇಂಶಾತ್ ಇದೀಗ, ಮೊಹ್ಮದ್ ಸಿರಾಜ್, ಶರ್ದೂಲ್ ಠಾಕೂರ್ ಪೈಪೋಟಿ ನೀಡುತ್ತಿದ್ದಾರೆ.
ಇದು ಇಶಾಂತ್ ಕಥೆಯಾದರೇ ಟೀಂ ಇಂಡಿಯಾ ಟೆಸ್ಟ್ ತಂಡದ ಬ್ಯಾಟರ್ ಗಳಾಗ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಅವರ ಭವಿಷ್ಯವೂ ಸರಣಿಯ ಮೇಲೆ ಅವಲಂಬಿತವಾಗಿದೆ.
ಸತತ ವೈಫಲ್ಯ ಅನುಭವಿಸುತ್ತಿರುವ ಕಾರಣದಿಂದಾಗಿ ರಹಾನೆ ಅವರನ್ನು ತಂಡದ ಉಪನಾಯಕನ ಪಟ್ಟದಿಂದ ಕೆಳಗಿಳಿಸಲಾಗಿದೆ. ಈ ಸರಣಿಯಲ್ಲೂ ಅಜಿಂಕ್ಯ ಮಿಂಚದೇ ಇದ್ದರೇ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ. ಯಾಕಂದರೇ ಅವರ ಸ್ಥಾನಕ್ಕಾಗಿ ಡೆಲ್ಲಿ ಬ್ಯಾಟರ್ ಶ್ರೇಯಸ್ ಅಯ್ಯರ್ ಕಾದುಕುಳಿತ್ತಿದ್ದಾರೆ.
ಇನ್ನು ಚೇತೇಶ್ವರ ಪೂಜಾರ ಪರಿಸ್ಥಿತಿ ಕೂಡ ವಿಭಿನ್ನವಾಗಿಲ್ಲ. ಪೂಜಾರ ಬಹಳ ಸಮಯದಿಂದ ಟೆಸ್ಟ್ ತಂಡಕ್ಕೆ ಆಯ್ಕೆ ಆಗುತ್ತಿದ್ದರೂ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ. ಅದರಲ್ಲೂ ಇದೀಗ ಪೂಜಾರಾ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ ವಾಲ್ ಪೈಪೋಟಿ ನಡೆಸುತ್ತಿದ್ದಾರೆ. ಹಿರಿತನ ಆಧಾರದಲ್ಲಿ ಈ ಬಾರಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಇವರನ್ನು ಆಯ್ಕೆ ಮಾಡಲಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಡಿಸೆಂಬರ್ 26 ರಂದು ಸೆಂಚುರಿಯನ್ನಲ್ಲಿ ಪ್ರಾರಂಭವಾಗುತ್ತದೆ. ಈ ಸರಣಿಯಲ್ಲಿ ಈ ಆಟಗಾರರು ಉತ್ತಮ ಪ್ರದರ್ಶನ ನೀಡಿದರೇ ಮಾತ್ರ ಮುಂದೆ ತಂಡದಲ್ಲಿ ಇರುತ್ತಾರೆ. ಇಲ್ಲದೇ ಇದ್ದಲ್ಲಿ ಇವರ ತಲೆತಂಡ ಗ್ಯಾರಂಟಿ ಎಂದು ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.