ಬೆಂಗಳೂರಿನಲ್ಲಿ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ
ಗಾಯಗೊಂಡಿರುವ ಟೀಮ್ ಇಂಡಿಯಾದ ವೈಟ್ ಬಾಲ್ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಬೆಂಗಳೂರಿನಲ್ಲಿದ್ದಾರೆ.
ಹೌದು, ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ವಕ ಔಟ್ ಮಾಡುತ್ತಿದ್ದಾರೆ.
ಈಗಾಗಲೇ ಗಾಯಗೊಂಡಿರುವುದರಿಂದ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.
ಆದ್ರೆ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಅವರು ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇನ್ನೊಂದೆಡೆ ವಿರಾಟ್ ಕೊಹ್ಲಿ ವೈಯುಕ್ತಿಕ ಕಾರಣ ಕೊಟ್ಟು ಏಕದಿನ ಸರಣಿಯನ್ನು ತಪ್ಪಿಸಿಕೊಂಡಿದ್ದಾರೆ.
ಅಂದ ಹಾಗೇ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಅವರು ಎನ್ ಸಿಎ ನಲ್ಲಿರುವುದನ್ನು ಬಹಿರಂಗ ಪಡಿಸಿದ್ದು ಭಾರತ 19 ವಯೋಮಿತಿ ತಂಡದ ನಾಯಕ ಯಶ್ ಧೂಳ್. ಯಶ್ ಧೂಳ್ ಅವರು ರವೀಂದ್ರ ಜಡೇಜಾ ಮತ್ತು ರೋಹಿತ್ ಶರ್ಮಾ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಸದ್ಯ ಭಾರತ 19 ವಯೋಮಿತಿ ತಂಡದ ಆಟಗಾರರು ಎನ್ ಸಿಎ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಡಿಸೆಂಬರ್ 23ರಿಂದ ಯುಎಇನಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿಗೆ ರೆಡಿಯಾಗುತ್ತಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕನಾಗಿದ್ದರು. ಇದೀಗ ಏಕದಿನ ತಂಡಕ್ಕೂ ರೋಹಿತ್ ಶರ್ಮಾ ಸಾರಥಿಯಾಗಿದ್ದಾರೆ. ನಾಲ್ಕು ವಾರಗಳಲ್ಲಿ ರೋಹಿತ್ ಶರ್ಮಾ ಫಿಟ್ ಆಗುವ ಸಾಧ್ಯತೆ ಇದೆ.