ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಆಡುವುದು ಅನುಮಾನ ಎನ್ನಲಾಗಿದೆ. ಜತೆಗೆ ಐಪಿಎಲ್ನಿಂದಲೂ ಹೊರಗುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಅಹಮದಾಬಾದ್ ಟೆಸ್ಟ್ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ ಮುಂಬೈ ಬ್ಯಾಟರ್ ತಂಡದಿಂದ ಹೊರಗುಳಿದಿದ್ದರು.
ಇದೀಗ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಬಿಸಿಸಿಐನ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಹೀಗಾಗಿ ಅವರು ರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಶುಕ್ರವಾರದಿಂದ ಆರಂಭವಾಗಲಿದೆ. ಆದರೆ ಅದರೊಳಗೆ ಶ್ರೇಯಸ್ ಅಯ್ಯರ್ ಚೇತರಿಸಿಕೊಳ್ಳುವುದು ಕೂಡ ಅನುಮಾನ.
ಹೀಗಾಗಿ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಇದಾದ ಬಳಿಕ ಅವರು ಗುಣಮುಖರಾದರೆ ಮಾತ್ರ ಮತ್ತೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.