Syed Mushtaq Ali Trophy: ಕರ್ನಾಟಕಕ್ಕೆ 9 ವಿಕೆಟ್ ಜಯ
ಸಂಘಟಿತ ಆಟದ ಪ್ರದರ್ಶನ ನೀಡಿದ ಕರ್ನಾಟಕ ತಂಡ ಮೇಘಾಲಯ ತಂಡವನ್ನು ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಯ ಎಲೈಟ್ ‘ಸಿ’ ಗುಂಪಿನ ಪಂದ್ಯದಲ್ಲಿ 9 ವಿಕೆಟ್ ಗಳಿಂದ ಮಣಿಸಿ, ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.
ಮೊದಲು ಬ್ಯಾಟ್ ಮಾಡಿದ ಮೇಘಾಲಯ ತಂಡದ ಬ್ಯಾಟ್ಸ್ ಮನ್ ಗಳು, ಕರ್ನಾಟಕದ ಬೌಲಿಂಗ್ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು. ಮನೀಷ್ ಬಳಗದ ಅನುಭವಿ ವೇಗದ ಬೌಲರ್ ಗಳು ವಿಕೆಟ್ ಬೇಟೆ ನಡೆಸಿ ಎದುರಾಳಿ ತಂಡಕ್ಕೆ ಪೆಟ್ಟು ನೀಡಿದರು.
ಮೇಘಾಲಯ ಪರ ಲ್ಯಾರಿ ಸಂಗ್ಮಾ 34, ಯೋಗೇಶ್ ತಿವಾರಿ 22, ರಾಜ್ ಬಿಸ್ವಾ 11 ರನ್ ಬಾರಿಸಿದ್ದು ಬಿಟ್ಟರೆ ಉಳಿದ ಬ್ಯಾಟ್ಸ್ ಮನ್ ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಮೇಘಾಲಯ 20 ಓವರ್ ಗಳಲ್ಲಿ 8 ವಿಕೆಟ್ ಗೆ 89 ರನ್ ಸೇರಿಸಿತು.
ಕರ್ನಾಟಕದ ಪರ ವಿಜಯ್ ಕುಮಾರ್ 3, ವಿದ್ವತ್ ಕಾವೇರಪ್ಪ, ವಾಸುಕಿ ಕೌಶಿಕ್, ಕೆ.ಗೌತಮ್ ತಲಾ ಒಂದು ವಿಕೆಟ್ ಪಡೆದರು.
ಗುರಿಯನ್ನು ಹಿಂಬಾಲಿಸಿದ ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ದೇವದತ್ ಪಡಿಕ್ಕಲ್ ರನ್ ಕಲೆ ಹಾಕುಲವಲ್ಲಿ ವಿಫಲರಾದರು. ಎರಡನೇ ವಿಕೆಟ್ ಗೆ ನಾಯಕ ಮಯಾಂಕ್ ಅಗರ್ ವಾಲ್ ಹಾಗೂ ಮನೀಷ್ ಪಾಂಡೆ ಜೋಡಿ ಅಜೇಯ 90 ರನ್ ಗಳ ಜೊತೆಯಾಟದ ಕಾಣಿಕೆ ನೀಡಿತು. ಮಯಾಂಕ್ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 47 ರನ್ ಸಿಡಿಸಿದರೆ, ಮನೀಷ್ ಅಜೇಯ 42 ರನ್ ಬಾರಿಸಿ ಜಯದಲ್ಲಿ ಮಿಂಚಿದರು. ಅಂತಿಮವಾಗಿ ಕರ್ನಾಟಕ 10.1 ಓವರ್ ಗಳಲ್ಲಿ 1 ವಿಕೆಟ್ ಗೆ 90 ರನ್ ಸೇರಿಸಿ ಜಯ ಸಾಧಿಸಿತು.
Syed Mushtaq Ali Trophy, Karnataka, Meghalaya, T-20