ಗುರುವಾರ ಲಂಡನ್ಗೆ ಆರಂಭಿಸಿದ ಭಾರತ ತಂಡ, ಶುಕ್ರವಾರ ದಿಂದ ಅಭ್ಯಾಸ ಆರಂಭಿಸಿತು.
ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಅಲ್ಲದೇ ಚೇತೇಶ್ವರ್ ಪೂಜಾರ್, ಶುಭಮನ್ ಗಿಲ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ಧುಲ್ ಠಾಕೂರ್, ಪ್ರಸಿದ್ಧ ಕೃಷ್ಣ, ಹನುಮ್ ವಿಹಾರಿ ಹಾಗೂ ಕೆ.ಎಸ್.ಭರತ್ ಅವನ್ನೊಳಗೊಂಡ ಭಾರತ ತಂಡ ಇಂಗ್ಲೆಂಡ್ ತಲುಪಿದೆ.
ಭಾರತ ತಂಡದ ಮುಖ್ಯ ಕೋಚ್ ರಾಹುಲ್ ಡ್ರಾವಿಡ್, ಭಾರತ ತಂಡವನ್ನು ಲಂಡನ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿರುವ ಟಿ-20 ಸರಣಿಯ ನಂತರ ಸೇರಿಕೊಳ್ಳಲಿದ್ದಾರೆ. ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ದದ ಐದನೇ ಹಾಗೂ ಅಂತಿಮ ಟಿ-20 ಪಂದ್ಯ ಜೂನ್ 19 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಭಾರತವು ಜುಲೈ 1 ರಿಂದ 5 ರ ವರೆಗೆ ಇಂಗ್ಲೆಂಡ್ ವಿರುದ್ಧ ಎಡ್ಬಸ್ಟನ್ನಲ್ಲಿ ಟೆಸ್ಟ್ ಪಂದ್ಯ ಆಡಲಿದ್ದು, ನಂತರ ಮೂರು ಏಕದಿನ ಹಾಗೂ ಮೂರು ಟಿ-20 ಪಂದ್ಯಗಳ ಸರಣಿಯನ್ನು ಆಡಲಿದೆ. ಜೂನ್ 24 ರಂದು ಭಾರತವು ಲೆಂಚಿಸ್ಟರ್ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಈಗಾಗಲೇ 2-1ರಿಂದ ಮುನ್ನಡೆ ಸಾಧಿಸಿದೆ.
ಇದಕ್ಕೂ ಮುನ್ನ ಐರ್ಲೆಂಡ್ ಪ್ರವಾಸ ಕೈಕೊಳ್ಳಲಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ, ಜೂನ್ 26 ಮತ್ತು 28 ರಂದು ಡಬ್ಲಿನ್ನಲ್ಲಿ ಎರಡು ಟಿ-20 ಪಂದ್ಯಗಳನ್ನು ಆಡಲಿದೆ.