ರಾಜ್ಕೋಟ್ನಲ್ಲಿ ಟೀಮ್ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಸರಣಿ ಗೆಲ್ಲಬೇಕಾದರೆ ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿರುವ ಟೀಮ್ಇಂಡಿಯಾ ಈ ಪಂದ್ಯಕ್ಕೆ 2 ಬದಲಾವಣೆ ಮಾಡುವ ಸಾಧ್ಯತೆ ಇದೆ.
ರಾಜ್ಕೋಟ್ನಲ್ಲಿ ಟೀಮ್ ಇಂಡಿಯಾದ 2 ಯುವ ಆಟಗಾರರು ಚೊಚ್ಚಲ ಪಂದ್ಯ ಆಡುವ ನಿರೀಕ್ಷೆಇದೆ. ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಅರ್ಶದೀಪ್ ಸಿಂಗ್ ಮತ್ತು ವೇಗಿ ಉಮ್ರಾನ್ ಮಲಿಕ್ ಟೀಮ್ ಇಂಡಿಯಾ ಕ್ಯಾಪ್ ಧರಿಸುವುದು ಬಹುತೇಕ ಪಕ್ಕಾ ಆಗಿದೆ.
ಆರ್ಶದೀಪ್ ಸಿಂಗ್ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೆತ್ ಓವರ್ನಲ್ಲಿ ಶಿಸ್ತುಬದ್ದ ಬೌಲಿಂಗ್ ದಾಳಿ ನಡೆಸಿದ್ದರು. ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಲು ಎದುರು ನೋಡುತ್ತಿದ್ದು, ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಅರ್ಶದೀಪ್ ಡೆತ್ ಓವರ್ ಸ್ಪೆಷಲಿಸ್ಟ್ ಆಗಿರುವುದರಿಂದ ಟೀಮ್ ಇಂಡಿಯಾದ ಬೌಲಿಂಗ್ಗೆ ಹೆಚ್ಚು ಬಲ ಬರಬಹುದು. ಅಷ್ಟೇ ಅಲ್ಲ ಹೊಸ ಚೆಂಡಿನಲ್ಲೂ ಅರ್ಶದೀಪ್ ಬೌಲಿಂಗ್ ಮಾಡಬಲ್ಲರು.
ಉಮ್ರಾನ್ ಮಲಿಕ್ ಈ ಬಾರಿಯ ಐಪಿಎಲ್ ಉರಿ ದಾಳಿಯಿಂದಲೇ ಸದ್ದು ಮಾಡಿದ್ದರು. ಗಂಟೆಗೆ 157ಕಿ.ಮೀಗಿಂತಲೂ ವೇಗವಾಗಿ ಬೌಲಿಂಗ್ ಮಾಡಬಲ್ಲ ಬೌಲರ್ ಈತ. ಆವೇಶ್ ಖಾನ್ ಕಳೆದ ಮೂರು ಪಂದ್ಯಗಳಲ್ಲಿ ಅಂತಹ ಗಮನಾರ್ಹ ಪ್ರದರ್ಶನ ತೋರಲು ಯಶಸ್ವಿಯಾಗಿಲ್ಲ. ಹೀಗಾಗಿ ಮಾರಕ ವೇಗಿ ಉಮ್ರಾನ್ ಮಲಿಕ್ಗೆ ಇಂದಿನ ಪಂದ್ಯದಲ್ಲಿ ತಂಡದೊಳಗೆ ಸ್ಥಾನ ನೀಡುವ ಸಾಧ್ಯತೆಯಿದೆ.
ಒಟ್ಟಿನಲ್ಲಿ ಟೀಮ್ ಇಂಡಿಯಾ ಹೊಸ ಹೊಸ ಆಟಗಾರರನ್ನು ಟ್ರೈ ಮಾಡುತ್ತಿದೆ. ಪ್ರಯೋಗ ಯಶಸ್ವಿಯಾದರೆ ಬೆಂಚ್ ಸ್ಟ್ರೆಂತ್ ಹೆಚ್ಚಾಗುತ್ತದೆ ಅನ್ನುವುದು ಮತ್ತೊಂದು ಪಾಸಿಟಿವ್.