ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 10 ವಿಕೆಟ್ಗಳ ಹೀನಾಯ ಸೋಲಿನ ಬೆನ್ನಲ್ಲೆ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾವಾನಾತ್ಮಕ ಸಂದೇಶ ಕಳಿಸಿದ್ದಾರೆ.
ಭಾರತ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡವೆನಿಸಿತು.
ನಮ್ಮ ಕನಸು ನನಸಾಗುವಲ್ಲಿ ಸ್ವಲ್ಪದರಲ್ಲಿ ಎಡವಿದೆವು ಮತ್ತು ನಿರಾಸೆಯಾಗಿದೆ. ಆದರೆ ಒಂದು ಗುಂಪಾಗಿ ಸ್ಮರಣೀಯ ಕ್ಷಣಗಳಿವೆ. ಮೈದಾನಕ್ಕೆ ಬಂದು ಬೆಂಬಲಿಸಿದ ಎಲ್ಲಾ ಅಭಿಮಾನಿಗಳಿಗೂ ಧನ್ಯವಾದ.
ಈ ಜೆರ್ಸಿ ತೊಡುವ ಮತ್ತು ದೇಶವನ್ನು ಪ್ರತಿನಿಧಿಸಿದಕ್ಕೆ ಹೆಮ್ಮೆ ಇದೆ ಎಂದು ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಂನಲ್ಲಿ ಬರೆದಿದ್ದಾರೆ.
ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಭಾರತ 168 ರನ್ ಕಲೆ ಹಾಕಿತು.
ಮೊದಲ 6 ಓವರ್ಗಳಲ್ಲಿ ಭಾರತ 1 ವಿಕೆಟ್ ನಷ್ಟಕ್ಕೆ 38 ರನ್ ಕಲೆ ಹಾಕಿತು. ಸೂರ್ಯ ಕುಮಾರ್ ಹೆಚ್ಚು ಹೊತ್ತು ನಿಲ್ಲದೇ ವಿಕೆಟ್ ಒಪ್ಪಿಸಿದರು. ಭಾರತ 100 ರನ್ ತಲುಪಲು 15 ಓವರ್ ತೆಗೆದುಕೊಂಡಿತು.