ಫೆಬ್ರವರಿ 6 ರಂದು ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮೂರು ಏಕದಿನ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಏಕದಿನ ತಂಡದ ಉಪನಾಯಕ ಕೆಎಲ್ ರಾಹುಲ್ ಆಡುತ್ತಿಲ್ಲ. ಆದರೆ, ಎರಡನೇ ಪಂದ್ಯಕ್ಕೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮೊದಲ ಏಕದಿನ ಪಂದ್ಯದಿಂದ ಅವರು ದೂರವಿರುವ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಆದರೆ ಈಗ ಅಸಲಿ ಕಾರಣ ಬೆಳಕಿಗೆ ಬಂದಿದೆ. ವಾಸ್ತವವಾಗಿ ಕೆಎಲ್ ರಾಹುಲ್ ತಮ್ಮ ಸಹೋದರಿಯ ವಿವಾಹದ ಕಾರಣ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲು, ಮೂವರು ಭಾರತೀಯ ಆಟಗಾರರಾದ ಶಿಖರ್ ಧವನ್, ರುತುರಾಜ್ ಗಾಯಕ್ವಾಡ್ ಮತ್ತು ಶ್ರೇಯಸ್ ಅಯ್ಯರ್ ಅವರು ಕೋವಿಡ್ ಪಾಸಿಟಿವ್ ಎಂದು ಕಂಡುಬಂದಿದ್ದು, ನಂತರ ಅವರನ್ನು ಮೊದಲ ಪಂದ್ಯಕ್ಕೆ ತಂಡದಲ್ಲಿ ಕರೆಯಬಹುದೆಂದು ಕಾಣಿಸುತ್ತದೆ. ಮದುವೆಯಲ್ಲಿ ಬ್ಯುಸಿಯಾಗಿರುವ ಅವರು ಎರಡನೇ ಏಕದಿನದಿಂದಲೇ ಲಭ್ಯರಾಗಲಿದ್ದಾರೆ ಎಂಬುದು ಇದೀಗ ದೃಢಪಟ್ಟಿದೆ. ಇದೀಗ ಮಯಾಂಕ್ ಅಗರ್ವಾಲ್ ಹಾಗೂ ಇಶಾನ್ ಕಿಶನ್ ಮೊದಲ ಏಕದಿನ ಪಂದ್ಯಕ್ಕೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವರದಿಯ ಪ್ರಕಾರ ಕೆಎಲ್ ರಾಹುಲ್ ತನ್ನ ಸಹೋದರಿಯ ಮದುವೆಯ ಕಾರಣದಿಂದ ಮೊದಲ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ, ಆದರೂ ಅವರ ಸಹೋದರಿ ಯಾವಾಗ ಮದುವೆಯಾಗುತ್ತಾರೆ ಎಂಬ ಮಾಹಿತಿ ತಿಳಿದಿಲ್ಲ. ಭಾರತವು ಫೆಬ್ರವರಿ 9 ರಂದು ಇಂಗ್ಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನು ಆಡಬೇಕಾಗಿದೆ. ಆದ್ದರಿಂದ ಮೂರು ದಿನಗಳ ಮೊದಲು, ಅಂದರೆ ಫೆಬ್ರವರಿ 6 ರಂದು ಕೆಎಲ್ ರಾಹುಲ್ ತಂಡವನ್ನು ಸೇರಿಕೊಳ್ಳಬೇಕಾಗುತ್ತದೆ. ಆದ್ದರಿಂದ ಅವರು ಮೂರು ದಿನಗಳ ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಬಹುದು.